ಔರಂಗಜೇಬ ಹಾಗೂ ಟಿಪ್ಪು ಸುಲ್ತಾನ್ರನ್ನು ವರ್ಣಿಸಿ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಕ್ಕೆ ವಿರೋಧ ಹೆಚ್ಚಾಗಿದ್ದು ಕೊಲ್ಹಾಪುರದಲ್ಲಿ ಹಿಂದೂಪರ ಸಂಘಟನೆಗಳು ನಡೆಸುತ್ತಿರುವ ಪ್ರತಿಭಟನೆಯು ಹಿಂಸಾಚಾರದ ರೂಪವನ್ನು ಪಡೆದುಕೊಂಡಿದ್ದು ಬೆಳಗಾವಿಯಲ್ಲಿ ಹೈ ಅಲರ್ಟ್ ಘೋಷಣೆಯಾಗಿದೆ.
ಕೊಲ್ಹಾಪುರದ ಜನತೆ ಈ ಹಿಂಸಾಚಾರದಲ್ಲಿ ಭಾಗಿಯಾಗಿದ್ದಾರೆ ಎಂದು ನನಗನಿಸುತ್ತಿಲ್ಲೆಂದು ಉದ್ಧವ್ ಠಾಕ್ರೆ ಬಣದ ಸಂಸದ ಸಂಜಯ್ ರಾವತ್ ಹೇಳಿದ್ದಾರೆ. ಕೊಲ್ಹಾಪುರದಲ್ಲಿ ನಡೆಯುತ್ತಿರುವ ಹಿಂಸಾಚಾರದ ಕುರಿತಂತೆ ಪ್ರತಿಕ್ರಿಯಿಸಿದ ಅವರು ಪರಿಸ್ಥಿತಿಯನ್ನು ಕದಡಲು ಹೊರಗಿನಿಂದ ಜನರನ್ನು ಕೊಲ್ಹಾಪುರಕ್ಕೆ ಕರೆಯಿಸಲಾಗಿದೆ ಎಂದು ಆರೋಪಿಸಿದ್ದಾರೆ.
Your experience on this site will be improved by allowing cookies.