ಕರ್ನಾಟಕ ರಾಜ್ಯದಲ್ಲಿನ ಸರ್ಕಾರಿ ಶಾಲೆಗಳಲ್ಲಿ ಸಮರ್ಪಕ ಮೂಲಸೌಕರ್ಯ ಕಲ್ಪಿಸದ ರಾಜ್ಯ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿರುವ ಹೈಕೋರ್ಟ್, ಶಾಲೆಗಳ ದುಸ್ಥಿತಿ ನಿಜಕ್ಕೂ ಆಘಾತ ಉಂಟು ಮಾಡಿದೆ. ಕುಡಿಯುವ ನೀರಿನ ವ್ಯವಸ್ಥೆ, ಶೌಚಗೃಹಗಳ ಸೌಕರ್ಯಗಳಿಲ್ಲದ ಶಾಲೆಗಳಿಗೆ ಯಾವ ಪಾಲಕರು ತಾನೇ ಮಕ್ಕಳನ್ನು ಕಳುಹಿಸುತ್ತಾರೆ, ಇಂತಹ ಸರ್ಕಾರಿ ಶಾಲೆಗಳಿಂದ ಯಾವ ರೀತಿಯ ಸಮಾಜ ನಿರ್ಮಿಸುತ್ತಿದ್ದೇವೆ ಎಂದು ಆತಂಕ ವ್ಯಕ್ತಪಡಿಸಿದೆ.
Your experience on this site will be improved by allowing cookies.