ಸರ್ಕಾರಿ ಶಾಲೆಗಳು ದಾಖಲಾತಿ ಕೊರತೆಯಿಂದಾಗಿ ಬಂದ್ ಮಾಡುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರಿ ಶಾಲೆಗಳನ್ನು ಉಳಿಸಿ, ದಾಖಲಾತಿ ಹೆಚ್ಚಿಸಿ, ಸರ್ಕಾರಿ ಶಾಲೆಗೆ ಗ್ರಾಮಸ್ಥರ ಮಕ್ಕಳನ್ನು ಹೆಚ್ಚಿನ ಸಂಖ್ಯೆಯಲ್ಲಿ ದಾಖಲಾತಿ ಮಾಡುವ ಉದ್ದೇಶದಿಂದ ಮೇಲುಕೋಟೆ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ ಹಾಗೂ ಸ್ಯಾಂಡಲ್ ವುಡ್ ಜನಪ್ರಿಯ ನಟ ಡಾಲಿ ಧನಂಜಯ ನೇತೃತ್ವದಲ್ಲಿ ಶಾಲೆಗಳ ಪ್ರಾರಂಭ ದಿನದಂದು ಹಳ್ಳಿಗಾಡಿನ ಸರ್ಕಾರಿ ಶಾಲೆಯ ಮಕ್ಕಳಿಗೆ ಹೂ ವಿತರಿಸಿ, ಸರ್ಕಾರಿ ಶಾಲೆಯಲ್ಲೇ ಚೆನ್ನಾಗಿ ಓದಿ, ನಮ್ಮ ಸಹಕಾರ ಇರುತ್ತದೆ ಎಂದು ಉತ್ತೇಜನ ನೀಡಿದರು.
ಕರ್ನಾಟಕ ರಾಜ್ಯದಲ್ಲಿನ ಸರ್ಕಾರಿ ಶಾಲೆಗಳಲ್ಲಿ ಸಮರ್ಪಕ ಮೂಲಸೌಕರ್ಯ ಕಲ್ಪಿಸದ ರಾಜ್ಯ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿರುವ ಹೈಕೋರ್ಟ್, ಶಾಲೆಗಳ ದುಸ್ಥಿತಿ ನಿಜಕ್ಕೂ ಆಘಾತ ಉಂಟು ಮಾಡಿದೆ. ಕುಡಿಯುವ ನೀರಿನ ವ್ಯವಸ್ಥೆ, ಶೌಚಗೃಹಗಳ ಸೌಕರ್ಯಗಳಿಲ್ಲದ ಶಾಲೆಗಳಿಗೆ ಯಾವ ಪಾಲಕರು ತಾನೇ ಮಕ್ಕಳನ್ನು ಕಳುಹಿಸುತ್ತಾರೆ, ಇಂತಹ ಸರ್ಕಾರಿ ಶಾಲೆಗಳಿಂದ ಯಾವ ರೀತಿಯ ಸಮಾಜ ನಿರ್ಮಿಸುತ್ತಿದ್ದೇವೆ ಎಂದು ಆತಂಕ ವ್ಯಕ್ತಪಡಿಸಿದೆ.
ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಕೂಡ ಮಾಡಲ್ಪಡುವ ಉಚಿತ ಯೋಜನೆಗಳು ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಪೂರಕವಾಗಿವೆ ಎಂದು ಗಾರವಾಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯೋಪಾದ್ಯಯ ಶರಣಪ್ಪ ಎಚ್
Your experience on this site will be improved by allowing cookies.