ರಾಜ್ಯದಲ್ಲಿ ದೊಡ್ಡಮಟ್ಟದ ಗಮನ ಸೆಳೆದಿದ್ದ ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ನಡೆದ ಹನುಮ ಧ್ವಜ ತೆರವು ವಿಚಾರ ಸದ್ಯಕ್ಕೆ ಬೂದಿಮುಚ್ಚಿದ ಕೆಂಡದಂತಾಗಿದೆ. ವಿವಾದವನ್ನು ಖಂಡಿಸಿ ಬಿಜೆಪಿ ನಾಯಕರೊಂದಿಗೆ ಜೆಡಿಎಸ್ ನಾಯಕರು ಸಹ ಬೀದಿಗಿಳಿದು ಹೋರಾಟ ನಡೆಸಿದ್ದು ಎಲ್ಲರ ಗಮನ ಸೆಳೆದಿತ್ತು.
ಕೆರಗೋಡು ಹನುಮ ಧ್ವಜ ತೆರವು ವಿವಾದ ಸಂಬಂಧ ಜಿಲ್ಲಾಧಿಕಾರಿ ನಡೆಸಿದ ಸಂಧಾನ ಸಭೆ ಯಶಸ್ವಿಯಾಗಿದೆ. ಪರಿಣಾಮ, ನಾಳೆ ನಡೆಯಬೇಕಿದ್ದ ಮಂಡ್ಯ ಬಂದ್ ಅನ್ನು ಮಾಡದಿರಲು ನಿರ್ಧರಿಸಲಾಗಿದೆ.
Your experience on this site will be improved by allowing cookies.